Skip to main content

Posts

ಅಜ್ಜನ ಅಚ್ಚಳಿಯದ ನೆನಪಿನಲ್ಲಿ...

🌸12th April, 1934 - 12th December, 2002🌸        ಇಂದು, ಸಾಹಿತ್ಯ ಶಿರೋಮಣಿ ನೀರ್ಪಾಜೆ ಭೀಮ ಭಟ್ ಅವರ 87 ನೇ ಜಯಂತ್ಯುತ್ಸವ✨   ಅಜ್ಜ ತೀರಿಹೋದಾಗ ನನಗೆ ಎರಡೇ ವರ್ಷ!! ಆದರೂ ಮನಸ್ಸಿನ ಒಂದು ಮೂಲೆಯಲ್ಲಿ ಒಂಥರಾ ಅಚ್ಚಳಿಯದ ಅಜ್ಜನ ನೆನಪು.. ನಾ ಪುಟ್ಟವಳಿದ್ದಾಗ "ನೀ ಬರೆಯಕ್ಕು ಪುಳ್ಳಿ...ತುಂಬಾ ಬರೆಯಕ್ಕು" ಎಂದು ನನ್ನನ್ನು ಬಳಿ ಕರೆದು ಯಾವಾಗಲೂ ಹೇಳುತ್ತಿದ್ದರೆಂದು ಎನ್ನಮ್ಮ ಈಗಲೂ ನೆನಪಿಸಿಕೊಳ್ಳುತ್ತಾರೆ.  ಇಂದು ನಾನು ಬರವಣಿಗೆಯತ್ತ  ಪುಟ್ಟ ಹೆಜ್ಜೆಯಿಡುತ್ತಿದ್ದೇನೆಂದರೆ, ಅದಕ್ಕೆ ಕಾರಣ ಅಜ್ಜನಿಂದಲೇ ಬಳುವಳಿಯಾಗಿ ಬಂದ 'ಸಾಹಿತ್ಯ ಪ್ರೇಮ' ಎಂದರೆ ತಪ್ಪಾಗಲಾರದೇನೋ!!  ನೀವು ನಮ್ಮ ಮನದ ಮೂಲೆಯಲ್ಲಿ ಸದಾ ನೆಲೆಯಾಗಿರುವಿರಿ..  ಸದಾ ನಿಮ್ಮ ಸ್ಮರಣೆಯಲ್ಲಿ....  ನಿಮ್ಮ ಪುಳ್ಳಿ...🙏🏻🙏🏻 - ಶ್ರೀಪದ 🌸

The King of Shravasti, a forgotten warrior | Legend of Suheldev - The King who saved India | Author Amish | Book review

Genre : Historical mythology I have always loved history and 'm always keen to learn about the things which were happened in real, especially the warriors who fought for motherland, make me get inspired. So, soon after looking at the attractive cover and good reviews, thought of taking up to read, 'Suheldev' by one of the best selling Indian authors, Amish Tripathi. This book is written by Amish with the assistance of writer's club, a group of writers and researches who helped him with the overall outcome of the book. This book explains the story of Suheldev, a great warrior in the history of Bharath, from a small kingdom of Shravasti, which is now located in Uttar Pradresh.  The novel is mainly written in the way, that shows the strength of unity. The way of writing is amazing. There are some parts of the novel which really make the reader curious and some parts are emotional too. It also values friendship and loyalty. The author has done a commendable job in bringin...

How can a person deal with a life full of problems and pains? | Book Review | A thousand splendid suns | Khaled Hosseini

Mariam and Laila. Two young ladies going through life full of hardships!  Finished reading Hosseini's another bestseller - A Thousand Splendid Suns. I wanted to read this novel since long and the wait was worth it! After reading it, I am out of words.  The bonding between the two ladies is beautifully connected by the author. They both have their own world of problems and start striving to deal with it at very young age.  Their first few meetings go harsh . The action and reaction of both towards each other being reasonable since both of them are dealing with problems and pains which cannot be compared - as to whose difficulties are greater than one another. But eventually, when they both understand each other and the connection which develops into a great bonding later to the extent of the ultimate sacrifice seems the best part of the novel to me. This is a masterpiece which makes us understand that ,  Be thankful for whatever you have in life, no matter how many di...

ಪುಟ್ಟ ಪುಟ್ಟ ಕ್ಷಣಗಳ ಆನಂದದಿ ಕಳೆಯುತಾ..

'ಸಮಯ' ಬಹು ಅಮೂಲ್ಯ!  ಅದರಲ್ಲೂ, ಚಿಕ್ಕಪುಟ್ಟ ಮಕ್ಕಳೊಡನೆ ಕಳೆವ ಸಮಯವಂತೂ ಅತಿ ಮಧುರವಾದ್ದು ಮತ್ತು ಮನಕೆ ಉಲ್ಲಾಸ ನೀಡುವಂಥದ್ದು..✨  ಅದೆಷ್ಟು ಸುವಿಚಾರಗಳು, ಅದೆಷ್ಟು ಪುಟ್ಟ ಪುಟ್ಟ ಖುಷಿ, ಅದೆಷ್ಟು ಮುಗ್ಧತೆ ತುಂಬಿದ ಹೊತ್ತು!  ಕೆಲವೊಂದು ಹಳೆಯ ವಿಷಯಗಳೂ ಅವರ ಬಾಯಲ್ಲಿ ಕೇಳುವಾಗ ಅದೆಷ್ಟು ಹೊಸದೆನಿಸುತದೆ!!  ಅವರ ಜೊತೆಗೆ ನಮ್ಮ ಸೃಜನಶೀಲತೆಯೂ  ತಕ್ಕ ಮಟ್ಟಿಗೆ ಬೆಳೆಯುವುದು ಸುಳ್ಳಲ್ಲ.. ಇಷ್ಟೆಲ್ಲ ಅನಿಸಿದ್ದೇಕೆಂದರೆ, ನಾನು ಒಂದಿಡೀ ದಿನ ೪ನೇ ತರಗತಿಯ ಒಂದು ಪುಟ್ಟ ಬಾಲೆಯೊಡನೆ ಕಳೆದೆ!! ಅವಳೇ ದೀಪಿಕಾ !!  ನಂತೂರಿನ ಶ್ರೀಭಾರತೀ ಕಾಲೇಜಿನ ಅನ್ನಶ್ರೀ ಅನ್ನಕುಟೀರದ ಅಡಿಗೆಭಟ್ಟರು ರವಿ ಅಣ್ಣ, ಅವರ ಮಗಳೇ ದೀಪಿಕಾ.  ಮೊದಲು ಮಿತವಾದ ಮಾತು. ಸುಮಾರು ಪ್ರಶ್ನೆಗಳನ್ನುಇ ಕೇಳಾಯಿತು, ಸುಮಾರು ಉತ್ತರಗಳೂ ಬಂದಾದವು! ಮತ್ತೆ ಅಲ್ಪ ಹೊತ್ತಿನಲ್ಲಿ, ಆಕೆಯೇ ಹಾರಾಡುತ್ತಿದ್ದ ಹಕ್ಕಿಯ ತೋರಿಸಿ ಮಾತಾಡತೊಡಗಿದಳು. ಹೀಗೆ ಮಾತು ಬೆಳೆಯುತ್ತಾ ಹೋದಂತೆ ತನ್ನ ಮುಗ್ಧ ಭಾಷೆಯಲ್ಲಿ ಶಾಲೆ, ಅಣ್ಣ, ಗೆಳೆಯರು.. ಅವರ ಕುರಿತೆಲ್ಲಾ ಹೇಳತೊಡಗಿದಳು..  ಅವರು ೫ ಜನ ಗೆಳತಿಯರಂತೆ, ಶಾಲೆ ಪಕ್ಕ ಮರಕೋತಿ ಆಟವಾಡ್ತಾರಂತೆ, ಹಾಗೇ ಅವರ ಕ್ಲಾಸಲ್ಲೇ ಒಬ್ಬ ಟೀಚರ್ ಮಗಳು ಇದ್ದಾಳಂತೆ!! ಟೀಚರ್ ಮಗಳ ವಿಷಯದಲ್ಲಿ ರಾಜಕೀಯ ನಡೆವ ಕಥೆಯನ್ನೂ ಹೇಳಿದಳು. ಇದೆಲ್ಲಾ ಕೇಳಿದಾಗ ಈಗಷ್ಟೆ ಪದವಿ ಮುಗಿಸಿದ ನನಗೆ, ಬಾಲ್...

ಅಮ್ಮ

ಕರುಳ ಬಳ್ಳಿಯ ಸಂಬಂಧ.. ಜನ್ಮದಾತೆಯ ಜೊತೆಗಿನ ಅನುಬಂಧ.. ಈ ಭಾವ-ಬಂಧವು ಅಕ್ಷರಗಳಿಗೆ ನಿಲುಕದ್ದು.. ' ಅಮ್ಮ ' ಎಂಬೆರಡಕ್ಷರಕೆ ಸಾಲುಗಳೇ ಸೋಲುವವು.. ನವಮಾಸ ಗರ್ಭದಿ ರಕ್ಷಿಸಿ ಎನಗೆ ಜನ್ಮವ ನೀಡ್ದೆ..  ನಿನ್ನ ರೂಪವನೇ ಎನಗೂ ಇತ್ತೆ.. ತ್ಯಾಗಮಯಿ ತಾಯಿ ನೀನಾದೆ.. ಏನಾದರೇನು, ಪ್ರತಿ ಬಾರಿ ನೀ ಎನ್ನೊಡನಿದ್ದೆ.. ಮೊದಲ ಗುರುವಾಗಿ ನಿನ್ನ ಸಂಸ್ಕಾರ-ನಿಷ್ಠೆಗಳ ಹಸ್ತಾಂತರಿಸಿದೆ.. ನೀನೇ ಎನ್ನ ಪ್ರೀತಿಯ ಪುಟ್ಟು  ಪ್ರಪಂಚವಮ್ಮಾ.. ಅರೆಕ್ಷಣ ಜಗಳಾಡಿದರೂ ಮುನಿಸು ತೋರದೆ ಕ್ಷಮಿಸುವಾಕೆ.. ತಿಳಿಯದೆ ಮಾಡ್ವ ತಪ್ಪನ್ನೆಲ್ಲ ತಿದ್ದುವಾಕೆ.. ಸುಖ-ದುಃಖಗಳಲ್ಲಿ ನಿರತ ನನ್ನೊಡನಿರುವಾಕೆ.. ತಾನ್ಪಟ್ಟ ಕಷ್ಟಗಳ ತನ್ನ ಮಗುವು ಕಾಣಬಾರದೆಂದು ಬಯಸುವಾಕೆ.. ನೀನಿರದೆ ನಾನೆಲ್ಲಿ!? ಅಮ್ಮಾ..... ಎನಗೆ, ನೀ ಹಾಡುವ ಮಧುರ ಪದ್ಯಗಳ ಕೇಳುವಾಸೆ..  ಈ ದಿನದ ಆಗು-ಹೋಗುಗಳ ಕುರಿತು ನಿನಗ್ಹೇಳುವಾಸೆ..  ನಮ್ಮಿಬ್ಬರದೇ ಪ್ರಪಂಚದ ಕುರಿತು ಕ್ಷಣಕಾಲ ಚರ್ಚಿಸುವಾಸೆ..  ನಿನ್ನ ಮಮತೆಯ ಮಡಿಲಲ್ಲಿ ಪುಟ್ಟ ಕಂದನಾಗಿ ಮಲಗುವಾಸೆ... ನಿನ್ನ ಒಡಲದು ಭಾವದ ಕಡಲಮ್ಮಾ.. ಎನಗೆ ಜನ್ಮವಿತ್ತ ಜನನಿ ನಿನಗೆ ಜನುಮದಿನದ ಶುಭಾಶಯ ❤️                                    ಇಂತಿ ನಿನ್ನ ಪುಟ್ಟು - ಶ್ರೀಪದ

"For you, a thousand times over"| The Kite Runner | Khaled Hosseini | Book Review

A fiction brings you different images and perspectives in mind, it makes you think, it makes you create your own world of imagination, it lives in you, it makes you feel the emotions filled in it. A fictional novel can make you change too. Personally, I have always loved fiction. Hearing good reviews of 'the Kite Runner' from many booklovers, I wanted to read it since long. Then I gifted it to myself along with 'And the mountains echoed' by the same writer (couldn't make-out to read it though)  An Afghani fiction novel, 'The Kite Runner' is a heart-wrenching story, which revolves around the life of Amir and Hassan, two little boys who are attached to each other, in many different ways. The honesty and loyalty of Hassan is very touching. The story makes you get back to your own life and introspect about yourself. Throughout the read, I questioned to myself,  'Did I ever make such mistake in my life?' or ' did I treated the ones who lov...

ಜಗವೆಂಬ ರಂಗಭೂಮಿ!

ಈ ಜಗವೊಂದು ನಾಟಕ ರಂಗ, ಪ್ರತಿ ಜೀವಿಗೂ ದೇವನಿತ್ತಹನು ಪಾತ್ರವ!  ಇಲ್ಲಿ ಒಬ್ಬರಂತಿನ್ನೊಬ್ಬರಿಲ್ಲ; ಜಗವೇ ಒಂದು ರಂಗು ರಂಗಿನ ಭೂಮಿಯಾದರೆ, ಅದರೊಳು ಕೋಟಿ ನಾಟಕಗಳು! ಇಲ್ಲಿ, ಪ್ರತಿಯೊಬ್ಬ ಪಾತ್ರಧಾರಿಯ ಹಣೆ ಬರಹವೂ ವಿಧಿ ವಿರಚಿತ; ಬ್ರಹ್ಮನಾಟದಿ ನಾವೆಲ್ಲ ಆತನಾಡಿಸಿದಂತೆ ಆಡುವ ಗೊಂಬೆಗಳು! ಒಳಿತು-ಕೆಡುಕುಗಳ ಮಿಶ್ರಭಾವವನು ಒಳಗೊಂಡ ರಂಗಸ್ಥಳವಿದು; ಈ "ಜೀವನಾಟಕ" ದಿ ತಿರುವುಗಳು ಸಹಸ್ರಾರು.. ಮಿಥ್ಯೆಯ ಮಾಯೆಯೊಡನೆ ನಿಜದ ಕೀಮತ್ತು ಕಡಿಮೆಯಾಗಿ ಕಾಣದಿರದು.. ಅದೇನೇ ಇರಲಿ, ಅದೇನೇ ಬರಲಿ, ಕಟ್ಟಕಡೆಯ ಜಯ, ಒಳಿತಿಗೇ, ನಿತ್ಯಸತ್ಯಕೇ! ಬದಲಾಗುತಿದೆ ಈ ಬದುಕು;  ದಿನ-ದಿನ, ಕ್ಷಣ ಕ್ಷಣಕೂ.. ಸೃಷ್ಟಿಯ ಸುಂದರ ಉಡುಗೊರೆಯಾದ ಈ ಬದುಕನು, ಹೂವಿನಂತೆ ಮಧುರವಾಗಿ ಬಾಳಿ ಸಾರ್ಥಕ್ಯ ಪಡೆಯೋಣ! ~ 'ಶ್ರೀಪದ'